ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
TSK
TSK · 2 ಪೂರ್ವಕಾಲವೃತ್ತಾ 18:13
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.
ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.
ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.
¶ ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,
¶ ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.