ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು.
TSK
TSK · 2 ಪೂರ್ವಕಾಲವೃತ್ತಾ 18:16
مراجع Treasury of Scripture Knowledge في ಕನ್ನಡ IRV.
ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು.
¶ “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
ಯೇಸು ಪ್ರತ್ಯುತ್ತರವಾಗಿ, ‹“ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ”› ಅಂದನು.