TSK

TSK · 2 ಪೂರ್ವಕಾಲವೃತ್ತಾ 18:5

مراجع Treasury of Scripture Knowledge في ಕನ್ನಡ IRV.

العودة إلى المقطع

“ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.

¶ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.

ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,

ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.

¶ ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”

ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.

ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.