TSK

TSK · 2 ಪೂರ್ವಕಾಲವೃತ್ತಾ 19:6

مراجع Treasury of Scripture Knowledge في ಕನ್ನಡ IRV.

العودة إلى المقطع

ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.

ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.

¶ ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.

ಯೇಸು ಹೇಳಿದ್ದೇನಂದರೆ, ‹“ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.›

¶ ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,