TSK

TSK · 2 ಪೂರ್ವಕಾಲವೃತ್ತಾ 20:1

مراجع Treasury of Scripture Knowledge في ಕನ್ನಡ IRV.

العودة إلى المقطع

ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.

ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.

ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.

¶ ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.

¶ ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.

ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.

‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›