¶ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
TSK
TSK · 2 ಪೂರ್ವಕಾಲವೃತ್ತಾ 20:6
مراجع Treasury of Scripture Knowledge في ಕನ್ನಡ IRV.
ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.
ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.
ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.
ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›
ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.