ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
TSK
TSK · 2 ಪೂರ್ವಕಾಲವೃತ್ತಾ 21:10
مراجع Treasury of Scripture Knowledge في ಕನ್ನಡ IRV.
¶ ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.
ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.
ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.