ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
TSK
TSK · 2 ಪೂರ್ವಕಾಲವೃತ್ತಾ 21:2
مراجع Treasury of Scripture Knowledge في ಕನ್ನಡ IRV.
ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.
ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.
ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.