ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
TSK
TSK · 2 ಪೂರ್ವಕಾಲವೃತ್ತಾ 21:7
مراجع Treasury of Scripture Knowledge في ಕನ್ನಡ IRV.
ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು.
ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”