ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.
TSK
TSK · 2 ಪೂರ್ವಕಾಲವೃತ್ತಾ 22:1
مراجع Treasury of Scripture Knowledge في ಕನ್ನಡ IRV.
¶ ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.
ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,
ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.