TSK

TSK · 2 ಪೂರ್ವಕಾಲವೃತ್ತಾ 23:18

مراجع Treasury of Scripture Knowledge في ಕನ್ನಡ IRV.

العودة إلى المقطع

ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,

ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,

¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.

ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.

ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.