TSK

TSK · 2 ಪೂರ್ವಕಾಲವೃತ್ತಾ 24:18

مراجع Treasury of Scripture Knowledge في ಕನ್ನಡ IRV.

العودة إلى المقطع

ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.

ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.

ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.

ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.

ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.

ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.

¶ ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.

ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.

ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.

ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.

ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.

¶ “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,