ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
TSK
TSK · 2 ಪೂರ್ವಕಾಲವೃತ್ತಾ 24:20
مراجع Treasury of Scripture Knowledge في ಕನ್ನಡ IRV.
ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.
¶ ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.
ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.
¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.