ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.
TSK
TSK · 2 ಪೂರ್ವಕಾಲವೃತ್ತಾ 24:25
مراجع Treasury of Scripture Knowledge في ಕನ್ನಡ IRV.
ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.
ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.
ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.
ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.