TSK

TSK · 2 ಪೂರ್ವಕಾಲವೃತ್ತಾ 25:15

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.

ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.

ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.

ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.

ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.

ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?

ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.

ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.