TSK

TSK · 2 ಪೂರ್ವಕಾಲವೃತ್ತಾ 25:8

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.

ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.

ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.

ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.

ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.

ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.

ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.

ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.

¶ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.

ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಆತನು ಅವರಿಗೆ, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,›