¶ “‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
TSK
TSK · 2 ಪೂರ್ವಕಾಲವೃತ್ತಾ 29:24
مراجع Treasury of Scripture Knowledge في ಕನ್ನಡ IRV.
ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
¶ ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.