ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.
TSK
TSK · 2 ಪೂರ್ವಕಾಲವೃತ್ತಾ 29:25
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,
¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
¶ ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.