ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
TSK
TSK · 2 ಪೂರ್ವಕಾಲವೃತ್ತಾ 29:27
مراجع Treasury of Scripture Knowledge في ಕನ್ನಡ IRV.
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
ಕೀರ್ತನೆಗಳು 137:3
TSK
ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.