TSK

TSK · 2 ಪೂರ್ವಕಾಲವೃತ್ತಾ 30:12

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.

ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.

¶ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.

¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.