ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
TSK
TSK · 2 ಪೂರ್ವಕಾಲವೃತ್ತಾ 30:14
مراجع Treasury of Scripture Knowledge في ಕನ್ನಡ IRV.
ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
¶ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!