¶ “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
TSK
TSK · 2 ಪೂರ್ವಕಾಲವೃತ್ತಾ 30:19
مراجع Treasury of Scripture Knowledge في ಕನ್ನಡ IRV.
ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.
ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.