ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
TSK
TSK · 2 ಪೂರ್ವಕಾಲವೃತ್ತಾ 30:24
مراجع Treasury of Scripture Knowledge في ಕನ್ನಡ IRV.
ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.