“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
TSK
TSK · 2 ಪೂರ್ವಕಾಲವೃತ್ತಾ 30:27
مراجع Treasury of Scripture Knowledge في ಕನ್ನಡ IRV.
ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.
ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?