TSK

TSK · 2 ಪೂರ್ವಕಾಲವೃತ್ತಾ 30:6

مراجع Treasury of Scripture Knowledge في ಕನ್ನಡ IRV.

العودة إلى المقطع

ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.

¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.

ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.

ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,

ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?

ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”

¶ ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.