¶ ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
TSK
TSK · 2 ಪೂರ್ವಕಾಲವೃತ್ತಾ 31:1
مراجع Treasury of Scripture Knowledge في ಕನ್ನಡ IRV.
ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.
¶ ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.