ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
TSK
TSK · 2 ಪೂರ್ವಕಾಲವೃತ್ತಾ 31:14
مراجع Treasury of Scripture Knowledge في ಕನ್ನಡ IRV.
¶ “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
“ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
¶ “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.
ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.
ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.