¶ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
TSK
TSK · 2 ಪೂರ್ವಕಾಲವೃತ್ತಾ 31:21
مراجع Treasury of Scripture Knowledge في ಕನ್ನಡ IRV.
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
¶ ‹“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.›