¶ ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
TSK
TSK · 2 ಪೂರ್ವಕಾಲವೃತ್ತಾ 32:13
مراجع Treasury of Scripture Knowledge في ಕನ್ನಡ IRV.
ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.
ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.