ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
TSK
TSK · 2 ಪೂರ್ವಕಾಲವೃತ್ತಾ 32:19
مراجع Treasury of Scripture Knowledge في ಕನ್ನಡ IRV.
ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
“ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?
ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.
ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?