TSK

TSK · 2 ಪೂರ್ವಕಾಲವೃತ್ತಾ 32:3

مراجع Treasury of Scripture Knowledge في ಕನ್ನಡ IRV.

العودة إلى المقطع

ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.

ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.

ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.

“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?