TSK

TSK · 2 ಪೂರ್ವಕಾಲವೃತ್ತಾ 32:7

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.

ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.

ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.

ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.

ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.

ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.

ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.

ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

¶ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.