TSK

TSK · 2 ಪೂರ್ವಕಾಲವೃತ್ತಾ 33:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.

¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.

ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.

ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.

ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.

¶ ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.

ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.

ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.

ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”

ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;