ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.
TSK
TSK · 2 ಪೂರ್ವಕಾಲವೃತ್ತಾ 34:14
مراجع Treasury of Scripture Knowledge في ಕನ್ನಡ IRV.
¶ ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.
ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
¶ ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.
ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.