ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.
TSK
TSK · 2 ಪೂರ್ವಕಾಲವೃತ್ತಾ 36:13
مراجع Treasury of Scripture Knowledge في ಕನ್ನಡ IRV.
ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?
ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.
ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.
ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.
ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.
ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
¶ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.