ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
TSK
TSK · 2 ಪೂರ್ವಕಾಲವೃತ್ತಾ 6:36
مراجع Treasury of Scripture Knowledge في ಕನ್ನಡ IRV.
ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
¶ “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
¶ ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.