ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
TSK
TSK · 2 ಪೂರ್ವಕಾಲವೃತ್ತಾ 6:5
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ
ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.
ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.
ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.