ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.
TSK
TSK · 2 ಪೂರ್ವಕಾಲವೃತ್ತಾ 7:20
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
¶ ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.
ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,
ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.
ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.