ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
TSK
TSK · 2 ಕೊರಿಂಥದವರಿಗೆ 13:5
مراجع Treasury of Scripture Knowledge في ಕನ್ನಡ IRV.
ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.
ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
‹ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.›
‹ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.›
‹ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,›‹ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ”› ಎಂದನು.
ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.
ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.
ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.
ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,
ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
‹ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ›‹ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ›‹ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.›