ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
TSK
TSK · 2 ಕೊರಿಂಥದವರಿಗೆ 8:2
مراجع Treasury of Scripture Knowledge في ಕನ್ನಡ IRV.
ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
¶ ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.
ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?