ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.
TSK
TSK · 2 ಅರಸುಗಳು 13:4
مراجع Treasury of Scripture Knowledge في ಕನ್ನಡ IRV.
ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.
ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.
ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.