ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
TSK
TSK · 2 ಅರಸುಗಳು 17:13
مراجع Treasury of Scripture Knowledge في ಕನ್ನಡ IRV.
ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.
ಆತನು ಅವರಿಗೆ, “ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ
ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.
ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.
ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
¶ ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.
ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.
ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.
ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
¶ “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.