¶ ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,
TSK
TSK · 2 ಅರಸುಗಳು 17:21
مراجع Treasury of Scripture Knowledge في ಕನ್ನಡ IRV.
ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.
ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,
ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.
ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.
ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”