¶ ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.
TSK
TSK · 2 ಅರಸುಗಳು 21:12
مراجع Treasury of Scripture Knowledge في ಕನ್ನಡ IRV.
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.
ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.
‹ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.›
ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.