ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;
TSK
TSK · 2 ಅರಸುಗಳು 21:9
مراجع Treasury of Scripture Knowledge في ಕನ್ನಡ IRV.
ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.
¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.
ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!
ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›
ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.