ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?
TSK
TSK · 2 ಅರಸುಗಳು 3:13
مراجع Treasury of Scripture Knowledge في ಕನ್ನಡ IRV.
ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,
ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.