ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
TSK
TSK · 2 ಪೇತ್ರನು 1:9
مراجع Treasury of Scripture Knowledge في ಕನ್ನಡ IRV.
¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.
¶ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.
¶ ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
¶ ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
‹ನೀನು ನಿನ್ನ ವಿಷಯದಲ್ಲಿ›‹ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,›‹ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.›