¶ ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,
TSK
TSK · 2 ಪೇತ್ರನು 2:1
مراجع Treasury of Scripture Knowledge في ಕನ್ನಡ IRV.
ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.
ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.
ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!
ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‹ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.›
‹ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.›
‹ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
‹ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.›
ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,
ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
¶ ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
¶ ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
¶ ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.
‹ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.›‹ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.›
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.