ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,
TSK
TSK · 2 ಪೇತ್ರನು 2:14
مراجع Treasury of Scripture Knowledge في ಕನ್ನಡ IRV.
ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.
ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›
ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.