TSK

TSK · 2 ಪೇತ್ರನು 2:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.

ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.

ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.

ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”

ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.

ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

‹ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?”› ಅಂದನು.

¶ ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,

ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?

“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.

¶ ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,

ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,

ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.

ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.

ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.

ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.

¶ “ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,